SSLC Social Science Chapter 2 British Alvikeya Vistarane Notes Question Answer Guide Question Paper Mcq Pdf Download in Kannada Medium Karnataka 2025, 10ನೇ ತರಗತಿ ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ ಸಮಾಜ ನೋಟ್ಸ್ ಪ್ರಶ್ನೋತ್ತರಗಳು, KSEEB Solutions for Class 10 Social Science Chapter 2 Notes State Syllabus, 10th Standard Social 2nd Lesson Notes Pdf, 10th Std Social 2nd lesson part 1 Extra Questions Pdf 10th History Chapter 2 Key Answer.

ಅಭ್ಯಾಸ
I. ಕೆಳಗಿನ ವಾಕ್ಯಗಳಲ್ಲಿ ಖಾಲಿ ಬಿಟ್ಟ ಸ್ಥಳಗಳನ್ನು ಸೂಕ್ತ ಉತ್ತರಗಳಿಂದ ಭರ್ತಿಮಾಡಿ.
- ಮೊದಲನೇ ಆಂಗ್ಲೋ-ಮರಾಠ ಯುದ್ಧದ ಅಂತ್ಯದಲ್ಲಿ ಮರಾಠರು ಮತ್ತು ಬ್ರಿಟಿಷರ ಮಧ್ಯ ಸಾಲ್ಬಾಯ್ ಒಪ್ಪಂದ ಆಯಿತು.
- ಸಹಾಯಕ ಸೈನ್ಯ ಪದ್ಧತಿಯನ್ನು ಜಾರಿಗೆ ತಂದವನು ಲಾರ್ಡ್ ವೆಲ್ಲೆಸ್ಲಿ
- ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯನ್ನು ಸಾ.ಶ. 1848 ರಲ್ಲಿ ಜಾರಿಗೆ ತರಲಾಯಿತು.
- ದತ್ತು ಮಕ್ಕಳಿಗೆ ಹಕ್ಕಿಲ್ಲವೆಂಬ ನೀತಿಯನ್ನು ಜಾರಿಗೆ ತಂದವನು ಡಾಲ್ ಹೌಸಿ
II. ಕೆಳಗಿನ ಪ್ರಶ್ನೆಗಳಿಗೆ ಗುಂಪುಗಳಲ್ಲಿ ಚರ್ಚಿಸಿ ಉತ್ತರಿಸಿ.
1. ಮೊದಲನೇ ಆಂಗ್ಲೋ ಮರಾಠ ಯುದ್ಧಕ್ಕೆ ಕಾರಣಗಳನ್ನು ವಿವರಿಸಿ.
ಬಕ್ಸಾರ್ ಕದನದಲ್ಲಿ ಸೋತು ಬ್ರಿಟಿಷರ ಆಶ್ರಯದಲ್ಲಿದ್ದ ಮೊಗಲ್ ಚಕ್ರವರ್ತಿ ಎರಡನೇ ಷಾ ಆಲಂನನ್ನು ಮರಾಠರು ಕರೆತಂದು ಮತ್ತೆ ದೆಹಲಿಯ ಸಿಂಹಾಸನದಲ್ಲಿ ಕುಳ್ಳಿರಿಸಿದರು. ಚಕ್ರವರ್ತಿಯು ಮೊದಲು ಬ್ರಿಟಿಷರಿಗೆ ನೀಡಿದ್ದ ಕೋರ ಮತ್ತು ಅಲಹಬಾದ್ಗಳನ್ನು ಮರಾಠರಿಗೆ ಕೊಟ್ಟನು. ಇದರಿಂದ ಮರಾಠರು ಮತ್ತು ಬ್ರಿಟಿಷರ ನಡುವೆ ವೈರತ್ವವು ಮನೆಮಾಡಿತು. ಮರಾಠರ ಬಲಿಷ್ಠ ಪೇಶ್ವ ಮಾಧವರಾವ್ ತೀರಿಕೊಂಡ ಬಳಿಕ ಆ ಸ್ಥಾನಕ್ಕೆ ಬಂದ ಅವನ ತಮ್ಮ ನಾರಾಯಣರಾಯನು ತನ್ನ ಚಿಕ್ಕಪ್ಪ ರಘೋಬನಾದ ಕೊಲೆಗೀಡಾದನು. ಇದರಿಂದ ಪೇಳ್ವೆಯ ಸ್ಥಾನಕ್ಕೆ ಕಲಹ ಏರ್ಪಟ್ಟಿತು. ರಘೋಬನು ಬ್ರಿಟಿಷರ ಬೆಂಬಲ ಕೋರಿದನು. ಬ್ರಿಟಿಷರು ಈ ಸಂದರ್ಭವನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳಲು ಯೋಚಿಸಿದರು ಇದು ಮೊದಲನೇ ಆಂಗ್ಲೋ ಮರಾಠ ಯುದ್ಧಕ್ಕೆ ದಾರಿ ಮಾಡಿಕೊಟ್ಟಿತು.
2. ಸಹಾಯಕ ಸೈನ್ಯ ಪದ್ಧತಿಯ ನಿಬಂಧನೆಗಳಾವುವು?
- ಭಾರತೀಯ ರಾಜನು ಬ್ರಿಟಿಷ್ ಸೈನಿಕ ತುಕಡಿಯನ್ನು ತನ್ನ ರಾಜ್ಯದಲ್ಲಿ ಇರಿಸಿಕೊಳ್ಳಬೇಕು.
- ಸೇನೆಯ ವೇತನ ಮತ್ತು ನಿರ್ವಹಣೆಯ ವೆಚ್ಚವನ್ನು ಸಂಬಂಧಪಟ್ಟ ರಾಜ್ಯವೇ ಭರಿಸಬೇಕು. ಇಲ್ಲವೆ ನಿರ್ದಿಷ್ಟ ಕಂದಾಯ ಪ್ರದೇಶವನ್ನು ಬಿಟ್ಟುಕೊಡಬೇಕು.
- ರಾಜನ ಆಸ್ಥಾನದಲ್ಲಿ ಬ್ರಿಟಿಷ್ ರೆಸಿಡೆಂಟನನ್ನು ನೇಮಿಸಿಕೊಳ್ಳಬೇಕು.
- ಬ್ರಿಟಿಷರ ಅನುಮತಿ ಇಲ್ಲದೆ ಆಸ್ಥಾನದಲ್ಲಿ ಯಾವುದೇ ಯುರೋಪಿಯನ್ನರನ್ನು ನೇಮಿಸಿಕೊಳ್ಳುವಂತಿಲ್ಲ.
- ಭಾರತದ ಯಾವುದೇ ರಾಜ್ಯಗಳೊಂದಿಗೆ ಯುದ್ಧ ಅಥವಾ ಸಂಧಾನ ಮಾಡಿಕೊಳ್ಳಬೇಕಾದರೆ ಗವರ್ನರ್ ಜನರಲ್ನ ಸಮ್ಮತಿ ಬೇಕು.
- ಇದಕ್ಕೆ ಪ್ರತಿಯಾಗಿ ಕಂಪನಿಯು ಆ ರಾಜ್ಯಕ್ಕೆ ಆಂತರಿಕ ಮತ್ತು ಬಾಹ್ಯ ರಕ್ಷಣೆಯನ್ನು ಒದಗಿಸುವುದು.
3. ಮೂರನೇ ಆಂಗ್ಲೋ ಮರಾಠ ಯುದ್ಧವನ್ನು ವಿವರಿಸಿ.
ಮರಾಠ ಮನೆತನಗಳು ತಮ್ಮ ಘನತೆ ಮತ್ತು ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ಇನ್ನುಲ್ಲದ ಪ್ರಯತ್ನ ನಡೆಸಿದವು. ಪೇಲ್ವೆ ಕೂಡ ಬ್ರಿಟಿಷರ ನಿಯಂತ್ರಣದಿಂದ ಮುಕ್ತಗೊಳ್ಳಲು ಹವಣಿಸುತ್ತಿದ್ದನು. ಪೇಳ್ವೆಯು ಪೂನಾದಲ್ಲಿ ಬ್ರಿಟಿಷ್ ರೆಸಿಡೆನ್ಸಿಯ ಮೇಲೆ ದಾಳಿ ನಡೆಸಿ ಸುಟ್ಟನು. ನಾಗಪುರದ ಅಪ್ಪಾಸಾಹೇಬ ಮತ್ತು ಮಲ್ದಾರರಾವ್ ಹೋಲ್ಕರ್ ಕೂಡ ಬ್ರಿಟಿಷರ ವಿರುದ್ಧ ದಂಗೆ ಎದ್ದು ಸೋತರು. ಅಂತಿಮವಾಗಿ ಪೇಶ್ವ ಎರಡನೇ ಬಾಜಿರಾಯನು ಬ್ರಿಟಿಷರ ವಿರುದ್ಧ ಕೋರೇಗಾವ್ ಮತ್ತು ಅಷ್ಟಿ ಯುದ್ಧಗಳಲ್ಲಿ ಸೋತು ಶರಣಾದನು. ಬ್ರಿಟಿಷರು ಪೇಶ್ವ ಪದವಿಯನ್ನು ರದ್ದುಗೊಳಿಸಿ ಬಾಜಿರಾಯನಿಗೆ ವಿಶ್ರಾಂತಿ ವೇತನ ನೀಡಿದರು. ಬದಲಿಗೆ ಶಿವಾಜಿಯ ವಂಶಸ್ಥ ಪ್ರತಾಪಸಿಂಹನನ್ನು ಸಣ್ಣ ರಾಜ್ಯ ಸತಾರದಲ್ಲಿ ಪ್ರತಿಷ್ಠಾಪಿಸಿ, ಮರಾಠರ ಸಾಂಪ್ರದಾಯಕ ಮುಖಂಡನಾಗಿಸುವ ಮೂಲಕ ಮರಾಠರ ಪ್ರತಿರೋಧವನ್ನು ನಿಗ್ರಹಿಸಿದರು.
4. ಬ್ರಿಟಿಷರ ಅಧಿಕಾರ ವಿಸ್ತರಣೆಗೆ ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯು ಹೇಗೆ ಸಹಕಾರಿಯಾಯಿತು?
ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯ ಪ್ರಕಾರ ಯಾವನೇ ಒಬ್ಬ ಭಾರತೀಯ ರಾಜನು ಮಕ್ಕಳಿಲ್ಲದೆ ಮೃತನಾದರೆ ಅವನು ದತ್ತು ತೆಗೆದುಕೊಂಡಿದ್ದ ಪುತ್ರನಿಗೆ ಉತ್ತರಾಧಿಕಾರತ್ವದ ಹಕ್ಕಿರಲಿಲ್ಲ. ಅಂತಹ ರಾಜ್ಯಗಳನ್ನು ಬ್ರಿಟಿಷ್ ಸಾಮ್ರಾಜ್ಯದಲ್ಲಿ ವಿಲೀನಗೊಳಿಸಿಕೊಳ್ಳಲಾಗುತ್ತಿತ್ತು. ಸತಾರ, ಜೈಪುರ್, ಸಂಬಲ್ಪುರ್, ಉದಯಪುರ್, ಝಾನ್ಸಿ, ನಾಗಪುರ ಮೊದಲಾದ ರಾಜ್ಯಗಳು ಈ ನೀತಿಗೆ ಒಳಪಟ್ಟವು. ಈ ರಾಜ್ಯಗಳ ರಾಜರಿಗೆ ಮಕ್ಕಳಿಲ್ಲದಿರುವುದನ್ನು ಮೊದಲೇ ಅರಿತಿದ್ದ ಬ್ರಿಟಿಷ್ ಗೌವರ್ನರ್ ಜನರಲ್ ಡಾಲ್ ಹೌಸಿಯು ಈ ನೀತಿಯನ್ನು ರಾಜಕೀಯ ಅಸ್ತ್ರವಾಗಿ ಜಾರಿಗೆ ತಂದನು. ಇದು ಬ್ರಿಟಿಷರ ಅಧಿಕಾರ ವಿಸ್ತರಣೆಗೆ ಸಹಕಾರಿಯಾಯಿತು.
5. ದತ್ತು ಮಕ್ಕಳಿಗೆ ಹಕ್ಕಿಲ್ಲ ನೀತಿಗೆ ಒಳಪಟ್ಟ ರಾಜ್ಯಗಳಾವುವು?
ಸತಾರ, ಜೈಪುರ್, ಸಂಬಲ್ಪುರ್, ಉದಯಪುರ್, ಝಾನ್ಸಿ, ನಾಗಪುರ ಮೊದಲಾದ ರಾಜ್ಯಗಳು ದತ್ತು ಮಕ್ಕಳಿಗೆ ಹಕ್ಕಿಲ್ಲ ನೀತಿಗೆ ಒಳಪಟ್ಟ ರಾಜ್ಯಗಳು.
ಹೆಚ್ಚುವರಿ ಪ್ರಶ್ನೆಗಳು:
I. ಈ ಪ್ರಶ್ನೆಗಳಿಗೆ ಉತ್ತರಿಸಿ:
- ಸಹಾಯಕ ಸೈನ್ಯ ಪದ್ಧತಿಯಿಂದ ಬ್ರಿಟಿಷರಿಗಾದ ಲಾಭವೇನು?
ಸಹಾಯಕ ಸೈನ್ಯ ಪದ್ಧತಿಯಿಂದ ಬ್ರಿಟಿಷರ ಸೈನಿಕ ನಿರ್ವಹಣೆ ಸುಲಭವಾಯಿತು ಮತ್ತು ಭಾರತೀಯ ರಾಜ್ಯಗಳನ್ನು ನಿಯಂತ್ರಣದಲ್ಲಿಡಲು ಸಾಧ್ಯವಾಯಿತು. ಭಾರತೀಯ ರಾಜ್ಯಗಳನ್ನು ಆರ್ಥಿಕವಾಗಿ ತೀವ್ರ ಶೋಷಣೆಗೆ ಗುರಿಪಡಿಸಲಾಯಿತು. ಅನೇಕ ಪ್ರಾಂತ್ಯಗಳು ಈ ಪದ್ಧತಿಯ ಒಪ್ಪಂದಕ್ಕೆ ಒಳಪಟ್ಟವು.
2. ಎರಡನೇ ಆಂಗ್ಲೋ-ಮರಾಠ ಯುದ್ಧಕ್ಕೆ ಯಾವುದು ಕಾರಣವಾಯಿತು?
ಮರಾಠ ಮನೆತನಗಳ ನಾಯಕರ ನಡುವಿನ ಸಂಘರ್ಷವೇ ಈ ಯುದ್ಧಕ್ಕೆ ಕಾರಣವಾಯಿತು.
3. ಸಹಾಯಕ ಸೈನ್ಯ ಪದ್ಧತಿ ಎಂದರೇನು? ಇದನ್ನು ಏಕೆ ಜಾರಿಗೆ ತರಲಾಯಿತು?
ಸಹಾಯಕ ಸೈನ್ಯ ಪದ್ಧತಿಯು ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ಮತ್ತು ಭಾರತೀಯ ರಾಜ್ಯಗಳ ನಡುವಿನ ಒಂದು ಸೈನಿಕ ಒಪ್ಪಂದವಾಗಿದೆ. ಭಾರತೀಯ ರಾಜ್ಯಗಳನ್ನು ನಿಯಂತ್ರಣಕ್ಕೆ ಒಳಪಡಿಸುವ ಸಲುವಾಗಿ ವೆಲ್ಲೆಸ್ಲಿಯು ಈ ಪದ್ಧತಿಯನ್ನು ಜಾರಿಗೆ ತಂದನು.
4. ಬ್ರಿಟಿಷರ ಸಾಮ್ರಾಜ್ಯ ವಿಸ್ತರಣೆಗೆ ಅಡ್ಡಿಯಾಗಿದ್ದವರು ಯಾರು?
ಮರಾಠ ಪೇಶ್ವೆಗಳು ಮತ್ತು ಮೈಸೂರು ಸಂಸ್ಥಾನದಲ್ಲಿ ಅಧಿಕಾರಕ್ಕೆ ಬಂದ ಹೈದರ್ ಅಲಿ ಮತ್ತು ಅವನ ಮಗ ಟಿಪ್ಪುಸುಲ್ತಾನ್, ಇವರ ನಂತರ ವಾಯುವ್ಯ ಭಾರತದಲ್ಲಿ ಸಿಖ್ಖರು.
5. ಬ್ರಿಟಿಷರು ಪಂಜಾಬಿನ ಮೇಲೆ ನೇರ ಆಳ್ವಿಕೆ ಹೇರಲು ಹೊರಟಾಗ ಆದ ಪರಿಣಾಮಗಳೇನು?
ಬ್ರಿಟಿಷರು ಪಂಜಾಬಿನ ಮೇಲೆ ನೇರ ಆಳ್ವಿಕೆಯನ್ನು ಹೇರಲು ಹೊರಟಾಗ ಸಿಬ್ಬರು ಪ್ರತಿಭಟಿಸಿದರು. ಈ ಪ್ರತಿಭಟನೆಗಳ ನೇತೃತ್ವವನ್ನು ಚಟ್ಟಾರ್ಸಿಂಗ್ ಅಟ್ಟಾರಿವಾಲ ಮತ್ತು ಮೂಲರಾಜ್ ವಹಿಸಿದ್ದರು. ಮತ್ತೆ ಸಿಬ್ಬರಿಗೆ ಸೋಲಾಯಿತು. ಅಂತಿಮವಾಗಿ ಲಾರ್ಡ್ ಡಾಲ್ಹೌಸಿಯು ಪಂಜಾಬನ್ನು ಸಾಮ್ರಾಜ್ಯದಲ್ಲಿ ವಿಲೀನಗೊಳಿಸಿಕೊಂಡನು.
6. ವೆಲ್ಲೆಸ್ಲಿಯು ತನ್ನ ಹುದ್ದೆಗೆ ರಾಜಿನಾಮೆ ನೀಡಿ ಸ್ವದೇಶಕ್ಕೆ ಮರಳಲು ಕಾರಣವೇನು?
ಸಾ.ಶ. 1803-1805ರವರೆಗೆ ಮರಾಠ ಮನೆತನಗಳ ಸೇನೆಯನ್ನು ವೆಲ್ಲೆಸ್ಲಿಯು ಅನೇಕ ಯುದ್ಧಗಳಲ್ಲಿ ಮಣಿಸಿದನು. ಆದರೆ ಅವನ ಯುದ್ಧಪ್ರಿಯ ನೀತಿಯಿಂದ ಕಂಪನಿಗೆ ಸಾಲದ ಹೊರೆ ಹೆಚ್ಚಿತು. ಇದರಿಂದ ತೀವ್ರ ಟೀಕೆಗೆ ಒಳಗಾದ ಅವನು ತನ್ನ ಹುದ್ದೆಗೆ ರಾಜಿನಾಮೆ ನೀಡಿ ಸ್ವದೇಶಕ್ಕೆ ಮರಳಿದನು.
7. 2ನೇ ಆಂಗ್ಲೋ ಮರಾಠ ಯುದ್ಧವನ್ನು ವಿವರಿಸಿ.
ಮರಾಠ ಮನೆತನಗಳ ನಾಯಕರ ನಡುವಿನ ಸಂಘರ್ಷ ಈ ಯುದ್ಧಕ್ಕೆ ಕಾರಣವಾಯಿತು. ಹೋಳ್ಳರ್ ಸೈನ್ಯವು ಸಿಂಧಿಯಾ ಮತ್ತು ಪೇಶ್ವೆಯ ಸೈನ್ಯವನ್ನು ಸೋಲಿಸಿತು. ಪೇಶ್ವ ಬ್ರಿಟಿಷರ ಸಹಾಯ ಯಾಚಿಸಿದನು. ಲಾರ್ಡ್ ವೆಲ್ಲೆಸ್ಲಿಗೆ ಮರಾಠರ ಆಂತರಿಕ ವಿಚಾರದಲ್ಲಿ ಪ್ರವೇಶಿಸಲು ಅವಕಾಶ ಸಿಕ್ಕಿತು. ಪೇಶ್ವೆಯು ಬೆಸ್ಸಿನ್ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಸಹಾಯಕ ಸೈನ್ಯ ಪದ್ಧತಿಯನ್ನು ಒಪ್ಪಿದನು. ಪೇಶ್ವೆಯು ಸಹಾಯಕ ಸೈನ್ಯ ಪದ್ಧತಿಯನ್ನು ಒಪ್ಪಿದ್ದನ್ನು ವಿರೋಧಿಸಿ ಹೋಲ್ಕರ್, ಭೋಂಸ್ಥೆ, ಸಿಂಧಿಯಾ ಮೊದಲಾದ ಮರಾಠ ಮನೆತನಗಳು ಒಗ್ಗೂಡಿದರು. ಮರಾಠ ಮನೆತನಗಳ ಸೇನೆಯನ್ನು ವೆಲ್ಲೆಸ್ಲಿಯು ಅನೇಕ ಯುದ್ಧಗಳಲ್ಲಿ ಮಣಿಸಿದನು.
8. ಲಾಹೋರ್ ಒಪ್ಪಂದದ ಪರಿಣಾಮಗಳೇನು?
- ಬ್ರಿಟಿಷ್ ರೆಸಿಡೆಂಟನು ಪಂಜಾಬಿನ ನಿಜವಾದ ಆಡಳಿತಗಾರನಾದನು.
- ಪಂಜಾಬ್ ಬ್ರಿಟಿಷ್ ಆಶ್ರಿತ ರಾಜ್ಯವಾಯಿತು.
II. ಖಾಲಿ ಬಿಟ್ಟ ಸ್ಥಳಗಳನ್ನು ಸೂಕ್ತ ಪದಗಳಿಂದ ಭರ್ತಿಮಾಡಿ.
- ಸಹಾಯಕ ಸೈನ್ಯ ಪದ್ಧತಿಯ ಒಪ್ಪಂದಕ್ಕೆ ಸಹಿ ಮಾಡಿದ ಮೊದಲ ರಾಜ್ಯ ಹೈದರಾಬಾದ್ ಸಂಸ್ಥಾನ
- ಬ್ರಿಟಿಷರು ಪ್ಲಾಸಿ ಮತ್ತು ಬಕ್ಸಾರ ಕದನಗಳ ಮೂಲಕ ಬಂಗಾಳ ಪ್ರಾಂತ್ಯದ ಮೇಲೆ ಸಂಪೂರ್ಣ ರಾಜಕೀಯ ನಿಯಂತ್ರಣ ಸಾಧಿಸಿದರು.
- ಪಂಜಾಬಿನಲ್ಲಿ ರಾಜಕೀಯ ಅರಾಜಕತೆ ತಲೆ ಎತ್ತಿದಾಗ ಬ್ರಿಟಿಷರು ಉಲ್ಲಂಘಿಸಿದ ಒಪ್ಪಂದ ನಿರಂತರ ಮೈತ್ರಿ ಒಪ್ಪಂದ
- ಬ್ರಿಟಿಷರು ಪೇಶ್ವೆ ಪದವಿಯನ್ನು ಬಾಜಿರಾಯ ನಿಗೆ ರದ್ದುಗೊಳಿಸಿ ವೇತನ ನೀಡಿದರು.
- ಸಾ.ಶ. 1848ರಲ್ಲಿ ಭಾರತಕ್ಕೆ ಗವರ್ನರ್ ಜನರಲ್ ಆಗಿ ಬಂದವನು ಡಾಲ್ ಹೌಸಿ
ಮುಖ್ಯಾಂಶಗಳು
- ಬ್ರಿಟಿಷರು ಕಾರ್ನಾಟಿಕ್ ಯುದ್ಧಗಳ ಮೂಲಕ ಭಾರತದಲ್ಲಿ ಯಾವುದೇ ಯುರೋಪ್ ದೇಶಗಳು ತಮ್ಮ ಎದುರಾಳಿಗಳಾಗಿ ನಿಲ್ಲದಂತೆ ಮಾಡಿದರು.
- ಸಾ.ಶ. 1765ರ ಹೊತ್ತಿಗೆ ಬಹುತೇಕ ಪೂರ್ವಭಾಗದ ಭಾರತದ ಮೇಲೆ ಪ್ರಭುತ್ವ ಸ್ಥಾಪಿಸಿದರು.
- ಬ್ರಿಟಿಷರ ವಿಸ್ತರಣಾ ನೀತಿಗೆ ಅಡ್ಡಿಯಾಗಿದ್ದವರು ಮರಾಠ ಪೇಳ್ವೆಗಳು ಮತ್ತು ಮೈಸೂರು ಸಂಸ್ಥಾನದಲ್ಲಿ ಅಧಿಕಾರಕ್ಕೆ ಬಂದ ಹೈದರಾಲಿ ಮತ್ತು ಅವನ ಮಗ ಟಿಪ್ಪುಸುಲ್ತಾನ್.
- ಬ್ರಿಟಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ದಂತಹ ನೀತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಉಪಾಯವಾಗಿ ಭಾರತೀಯ ರಾಜ್ಯಗಳನ್ನು ಕಬಳಿಸಿದರು.
- ಈ ಅವಧಿಯಲ್ಲಿ ಮೂರು ಆಂಗ್ಲೋ-ಮರಾಠ ಯುದ್ಧಗಳು, ನಾಲ್ಕು ಆಂಗ್ಲೋ-ಮೈಸೂರು ಯುದ್ಧಗಳು ಮತ್ತು ಎರಡು ಆಂಗ್ಲೋ-ಸಿಖ್ ಯುದ್ಧಗಳು ನಡೆದವು.
- ಬ್ರಿಟಿಷರು ಮತ್ತು ಮರಾಠ ಒಕ್ಕೂಟಗಳ ನಡುವೆ ಸಾ.ಶ. 1775- 1782ರವರೆಗೆ ನಡೆದ ಮೊದಲ ಆಂಗ್ಲೋ-ಮರಾಠ ಯುದ್ಧದಲ್ಲಿ ಮರಾಠ ಒಕ್ಕೂಟವು ಯುದ್ಧ ಮುಂದುವರಿಸಲಾಗದೆ ಬ್ರಿಟಿಷರೊಂದಿಗೆ ಸಾಲ್ಬಾಯ್ ಒಪ್ಪಂದವನ್ನು ಮಾಡಿಕೊಂಡಿತು.
- ಭಾರತೀಯ ರಾಜ್ಯಗಳನ್ನು ನಿಯಂತ್ರಣಕ್ಕೆ ಒಳಪಡಿಸಿಕೊಳ್ಳುವ ಸಲುವಾಗಿ ಲಾರ್ಡ್ ವೆಲ್ಲೆಸ್ಲಿಯು ಸಾ.ಶ. 1798ರಲ್ಲಿ ಸಹಾಯಕ ಸೈನ್ಯ ಪದ್ಧತಿಯನ್ನು ಜಾರಿಗೆ ತಂದನು.
- ಎರಡನೇ ಆಂಗ್ಲೋ ಮರಾಠ ಯುದ್ಧವು ಸಾ.ಶ. 1803-1805ರವರೆಗೆ ನಡೆಯಿತು. ಈ ಅವಧಿಯಲ್ಲಿ ಮರಾಠ ಮನೆತನಗಳ ಸೇನೆಯನ್ನು ವೆಲ್ಲೆಸ್ಲಿಯು ಅನೇಕ ‘ಯುದ್ಧಗಳಲ್ಲಿ ಸೋಲಿಸಿದನು.
- ಸಾ.ಶ. 1817-1818ರವರೆಗೆ ನಡೆದ ಮೂರನೇ ಆಂಗ್ಲೋ-ಮರಾಠ ಯುದ್ಧದಲ್ಲಿ ಮರಾಠರಿಗೆ ಸೋಲುಂಟಾಯಿತು. ಬ್ರಿಟಿಷರು ಶಿವಾಜಿಯ ವಂಶಸ್ಥ ಪ್ರತಾಪಸಿಂಹನನ್ನು ಸಣ್ಣ ರಾಜ್ಯ ಸತಾರದಲ್ಲಿ ಪ್ರತಿಷ್ಠಾಪಿಸಿ ಮರಾಠರ ಪ್ರತಿರೋಧವನ್ನು ನಿಗ್ರಹಿಸಿದರು.
- ಬ್ರಿಟಿಷರು ಸಾ.ಶ. 1818 ರಿಂದ ಸಾ.ಶ 1857ರವರೆಗೆ ಅಖಂಡ ಭಾರತವನ್ನು ಗೆಲ್ಲುವ ಕಾರ್ಯವನ್ನು ಪೂರ್ಣಗೊಳಿಸಿದರು.
- ಆಂಗ್ಲೋ-ಸಿಖ್ ಯುದ್ಧದಲ್ಲಿ ಸಿಬ್ಬರಿಗೆ ಸೋಲಾಯಿತು. ಲಾರ್ಡ್ ಡಾಲ್ ಹೌಸಿಯು ಪಂಜಾಬನ್ನು ಬ್ರಿಟಿಷ್ ಸಾಮ್ರಾಜ್ಯದಲ್ಲಿ ವಿಲೀನಗೊಳಿಸಿಕೊಂಡನು.
- ಸಾ.ಶ. 1848ರಲ್ಲಿ ಭಾರತಕ್ಕೆ ಗವರ್ನರ್ ಜನರಲ್ ಆಗಿ ಬಂದ ಡಾಲ್ ಹೌಸಿಯು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯನ್ನು ಜಾರಿಗೆ ತಂದನು.
- ಡಾಲ್ಹೌಸಿಯ ತಡೆಯಿಲ್ಲದ ರಾಜ್ಯಾಕ್ರಮಣದ ನಡೆಯಿಂದ ಭಾರತೀಯ ರಾಜರು ಮಾತ್ರವಲ್ಲದೆ ಸಾಮಾನ್ಯ ಜನವರ್ಗ ಕೂಡ ಬ್ರಿಟಿಷರ ವಿರುದ್ಧ ಬಂಡೇಳುವಂತೆ ಮಾಡಿತು. ಇದರ ಪರಿಣಾಮವಾಗಿಯೇ ಸಾ.ಶ. 1857ರ ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮವು ಸ್ಪೋಟಗೊಂಡಿತ್ತು.
ಇತರೆ ವಿಷಯಗಳು :
10ನೇ ತರಗತಿ ಭಾರತದಲ್ಲಿ ಬ್ರಿಟಿಷ್ ಆಳ್ವಿಕೆಯ ಪರಿಣಾಮಗಳು ಸಮಾಜ ನೋಟ್ಸ್
10ನೇ ತರಗತಿ ಭಾರತಕ್ಕೆ ಯುರೋಪಿಯನ್ನರ ಆಗಮನ ಪಾಠದ ನೋಟ್ಸ್
10ನೇ ತರಗತಿ ಎಲ್ಲಾ ವಿಷಯಗಳ ನೋಟ್ಸ್