10th Standard Bharatada Modala Swatantra Sangrama Social Science Notes Question Answer Guide Mcq Pdf Download in Kannada Medium Karntaka 2025, 10ನೇ ತರಗತಿ ಭಾರತದ ಮೊದಲ ಸ್ವಾತಂತ್ರ್ಯ ಸಂಗ್ರಾಮ ಸಮಾಜ ವಿಜ್ಞಾನ ನೋಟ್ಸ್ ಪ್ರಶ್ನೋತ್ತರಗಳು ಕನ್ನಡ ಮಾಧ್ಯಮ,10th Std ಭಾರತದ ಮೊದಲ ಸ್ವಾತಂತ್ರ್ಯ ಸಂಗ್ರಾಮ (1857) Question Answer, State Syllabus Class 10 Social Science 17th Lesson Question Answer, Kseeb Solutions for Class 10 Social Science Chapter 17 Notes, SSLC Social Science Chapter 17 question Answer, Bharatada Modala Swatantrya Sangrama (1857) Notes in Kannada, 10th Social Science Bharatada Prathama Swatantra Sangrama Question Answer.

ಭಾರತದ ಮೊದಲ ಸ್ವಾತಂತ್ರ್ಯ ಸಂಗ್ರಾಮ (1857) ನೋಟ್ಸ್
ಅಭ್ಯಾಸ
I. ಬಿಟ್ಟಿರುವ ಸ್ಥಳವನ್ನು ಸೂಕ್ತ ಪದದಿಂದ ತುಂಬಿರಿ.
1. ಸಾ.ಶ. 1857ರ ಹೋರಾಟವನ್ನು ಬ್ರಿಟಿಷ್ ಇತಿಹಾಸಕಾರರು ಸಿಪಾಯಿ ದಂಗೆ ಎಂದು ಕರೆದಿದ್ದಾರೆ.
2. ಸಾ.ಶ. 1857ರ ಹೋರಾಟದ ಸಮಯದಲ್ಲಿ ಬ್ಯಾರಕ್ಪುರದಲ್ಲಿ ಬ್ರಿಟಿಷ್ ಅಧಿಕಾರಿಯನ್ನು ಕೊಂದವನು ಮಂಗಲ ಪಾಂಡೆ
3. ಝಾನ್ಸಿ ರಾಣಿಯು ಬ್ರಿಟಿಷರ ವಿರುದ್ಧದ ಯುದ್ಧದಲ್ಲಿ ಗ್ವಾಲಿಯರ್ ನ್ನು ವಶಕ್ಕೆ ಪಡೆದಳು.
4. ಸಾ.ಶ. 1857 ರಲ್ಲಿ ಭಾರತ್ನಲ್ಲಿ ಬ್ರಿಟನ್ ರಾಣಿಯು ಹೊರಡಿಸಿದ ಘೋಷಣೆಯನ್ನು ಭಾರತೀಯ ಮಹಾಸನ್ನದು ಎಂದು ಕರೆಯಲಾಗಿದೆ.
II. ಕೆಳಗಿನ ಪ್ರಶ್ನೆಗಳಿಗೆ ಗುಂಪುಗಳಲ್ಲಿ ಚರ್ಚಿಸಿ ಉತ್ತರಿಸಿರಿ.
1.ಬ್ರಿಟಿಷರ ವಿರುದ್ಧದ 1857ರ ಪ್ರತಿಭಟನೆಗೆ ರಾಜಕೀಯ ಅಂಶಗಳು ಪ್ರೇರಕವಾದವು ಹೇಗೆ?
ಬ್ರಿಟಿಷರು ಜಾರಿಗೆ ತಂದಿದ್ದ ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯ ಅನ್ವಯ ಸತಾರ, ಜೈಪುರ, ಝಾನ್ಸಿ, ಉದಯಪುರ ಮೊದಲಾದ ಸಂಸ್ಥಾನಗಳು ಬ್ರಿಟಿಷರ ವಶವಾದವು. ಡಾಲ್ಹೌಸಿಯು ತಂಜಾವೂರು ಮತ್ತು ಕರ್ನಾಟಿಕ್ ನವಾಬರಿಗಿದ್ದ ರಾಜ ಪದವಿಗಳನ್ನು ರದ್ದುಪಡಿಸಿದನು. ಮೊಗಲ್ಚಕ್ರವರ್ತಿ ಔದ್ನ ನವಾಬ ಮೊದಲಾದ ರಾಜರುಗಳನ್ನು ಇಂಗ್ಲಿಷರು ಅಧಿಕಾರದಿಂದ ಪದಚ್ಯುತಗೊಳಿಸಿದರು. ಪರಿಣಾಮವಾಗಿ ಇವರನ್ನು ಅವಲಂಬಿಸಿದ ಲಕ್ಷಾಂತರ ಸೈನಿಕರು ನಿರುದ್ಯೋಗಿಗಳಾದರು. ಇದು ಬ್ರಿಟಿಷರ ವಿರುದ್ಧದ ಸಾ.ಶ.೧೮೫೭ರ ಪ್ರತಿಭಟನೆಗೆ ಪ್ರೇರಕವಾಯಿತು.
2. ಸಾ.ಶ. 1857ರ ಹೋರಾಟದ ಆರ್ಥಿಕ ಬದಲಾವಣೆಗಳು ಹೇಗೆ ಕಾರಣವಾದವು? ವಿವರಿಸಿ.
ಇಂಗ್ಲೆಂಡಿನಲ್ಲಾದ ಕೈಗಾರಿಕಾ ಕ್ರಾಂತಿಯ ಪರಿಣಾಮವಾಗಿ ಕರಕುಶಲತೆ ಮತ್ತು ದೇಶೀಯ ಕೈಗಾರಿಕೆಗಳು ಕ್ಷೀಣಿಸಿದವು. ಇಂಗ್ಲೆಂಡ್ ವ್ಯಾಪಾರಿ ರಾಷ್ಟ್ರವಾಗಿರದೆ ಕೈಗಾರಿಕೆಗಳ ಕಾರ್ಯಾಗಾರವಾಯಿತು. ಭಾರತದಲ್ಲಿದ್ದಂತಹ ಕರಕುಶಲಗಾರರು ನಿರುದ್ಯೋಗಿಗಳಾದರು. ವಿಶೇಷವಾಗಿ ಬಟ್ಟೆ ಮತ್ತು ಉಣ್ಣೆ ಕೈಗಾರಿಕೆಗಳು ಅವನತಿ ಹೊಂದಿ ನೇಕಾರಿಕೆ ವೃತ್ತಿಯವರು ಉದ್ಯೋಗ ಕಳೆದುಕೊಂಡರು, ಗೃಹಕೈಗಾರಿಕೆಗಳು ಇದೇ ಬಗೆಯ ತೀವ್ರ ಆರ್ಥಿಕನಷ್ಟ ಅನುಭವಿಸಿ ಶಿಥಿಲಗೊಂಡವು. ಭಾರತದ ವಸ್ತುಗಳನ್ನು ಇಂಗ್ಲೆಂಡಿನಲ್ಲಿ ಮಾರಲು ಇಂಗ್ಲಿಷರು ದುಬಾರಿ ಸುಂಕವನ್ನು ಹೇರಿದರು. ಜಮೀನ್ದಾರಿ ಪದ್ಧತಿಯಿಂದಾಗಿ ಸರ್ಕಾರ ಮತ್ತು ರೈತನ ಮಧ್ಯೆ ಇದ್ದ ಮಧ್ಯವರ್ತಿ ಜಮೀನ್ದಾರನು ಕೃಷಿಕರನ್ನು ಶೋಷಿಸುತ್ತಿದ್ದನು. ಕಂದಾಯ ವಸೂಲಿ ಮಾಡಲು ತಾಲ್ಲೂಕುದಾರರಿಗೆ ನೀಡಿದ್ದ ಹಕ್ಕುಗಳನ್ನು ಹಿಂಪಡೆಯಲಾಯಿತು. ಇನಾಂ ಆಯೋಗ ನೇಮಿಸಿ ಇನಾಂ ಭೂಮಿಯನ್ನು ವಾಪಸ್ ಪಡೆಯಲಾಯಿತು. ಇದರಿಂದಾಗಿ ಕೃಷಿಕರು ತೀವ್ರವಾಗಿ ಅವಮಾನ ಮತ್ತು ಆರ್ಥಿಕ ಸಂಕಷ್ಟ ಅನುಭವಿಸಿದರು. ಇದೂ ಕೂಡ ರೈತರ ಮಹಾನ್ ಪ್ರತಿಭಟನೆಗೆ ಕಾರಣವಾಯಿತು.
3. ಸಾ.ಶ. 1857ರ ಹೋರಾಟದಲ್ಲಿ ಸೈನಿಕರ ಧಾರ್ಮಿಕ ಮನೋಭಾವ ‘ವನ್ನು ಪ್ರಚೋದಿಸಿದ ಅಂಶಗಳಾವುವು?
ಭಾರತೀಯ ಸೈನಿಕರನ್ನು ಸಾಗರ ದಾಟಿದ ಸೇವೆಗೆ ಒತ್ತಾಯಿಸಿದ್ದು, ರಾಯಲ್ ಎನ್ ಫೀಲ್ಡ್ ಬಂದೂಕುಗಳನ್ನು ನೀಡುತ್ತಿದ್ದುದು, ಬಂದೂಕುಗಳಿಗೆ ಉಪಯೋಗಿಸುತ್ತಿದ್ದ ತುಪಾಕಿಗಳಿಗೆ ಹಂದಿ ಮತ್ತು ಹಸುವಿನ ತುಪ್ಪ ಸವರಿದ್ದಾರೆಂಬ ವದಂತಿ ಹಬ್ಬಿದ್ದು, ಹಿಂದೂಗಳಿಗೆ ಹಸು ಪವಿತ್ರವಾದರೆ, ಮುಸ್ಲಿಮರಿಗೆ ಹಂದಿಯು ನಿಷಿದ್ಧವಾಗಿತ್ತು. ಈ ಎಲ್ಲ ಅಂಶಗಳು ಧಾರ್ಮಿಕ ಮನೋಭಾವವನ್ನು ಪ್ರಚೋದಿಸಿದಲು ಕಾರಣವಾದವು.
4. ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೆ ತತ್ಕ್ಷಣದ ಕಾರಣಗಳಾವುವು?
ಇಂಗ್ಲಿಷ್ ಸೇನೆಯಲ್ಲಿದ್ದ ಭಾರತೀಯ ಸೈನಿಕರಿಗೆ ರಾಯಲ್ ಎನ್ಫೀಲ್ಡ್ ಎಂಬ ನವೀನ ಬಂದೂಕುಗಳನ್ನು ನೀಡುತ್ತಿದ್ದರು. ಬಂದೂಕುಗಳಿಗೆ ಉಪಯೋಗಿಸುತ್ತಿದ್ದ ತುಪಾಕಿಗಳಿಗೆ ಹಂದಿ ಮತ್ತು ಹಸುವಿನ ಕೊಬ್ಬನ್ನು ಸವರಿದ್ದಾರೆ ಎಂಬ ವದಂತಿ ಹಬ್ಬಿತ್ತು. ಹಿಂದುಗಳಿಗೆ ಹಸು ಪವಿತ್ರವಾದರೆ ಮುಸ್ಲಿಂರಿಗೆ ಹಂದಿಯು ನಿಷಿದ್ದವಾಗಿತ್ತು. ಈ ಘಟನೆಯು ದಂಗೆಗೆ ತಕ್ಷಣದ ಕಾರಣವಾಯಿತು.
5. ಸಾ.ಶ. 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ವಿಫಲತೆಗೆ ಕಾರಣಗಳನ್ನು ಪಟ್ಟಿಮಾಡಿ.
- ಇದು ಇಡೀ ಭಾರತವನ್ನು ವ್ಯಾಪಿಸಿದ ಹೋರಾಟವಾಗಿರಲಿಲ್ಲ.
- ಇದು ದೇಶದ ಬಿಡುಗಡೆಗಾಗಿ ನಡೆದದ್ದಕ್ಕಿಂತ ಅವರ ಹಿತಾಸಕ್ತಿ ಹಾಗೂ ಹಕ್ಕುಗಳಿಗಾಗಿ ನಡೆದಿತ್ತು.
- ಇದು ಯೋಜಿತ ಹೋರಾಟವಾಗಿರದೆ ಅನಿರೀಕ್ಷಿತ ಕಾರಣಗಳಿಂದ ಪ್ರೇರೇಪಿತವಾಗಿತ್ತು.
- ಬ್ರಿಟಿಷ್ ಸೈನಿಕರಲ್ಲಿ ಒಗ್ಗಟ್ಟಿದ್ದರೆ ಭಾರತೀಯ ಸೈನಿಕರಲ್ಲಿದ್ದ ಭಿನ್ನತೆಯು ಹೋರಾಟದ ವಿಫಲತೆಗೆ ಕಾರಣವಾಗಿದೆ. ಅಲ್ಲದೆ ಸೂಕ್ತ ಮಾರ್ಗದರ್ಶನ ಮತ್ತು ವ್ಯವಸ್ಥಿತ ಸಂಘಟನೆಯ ಕೊರತೆ ಇತ್ತು.
- ಯುದ್ಧತಂತ್ರ, ಸೈನಿಕ ಪರಿಣತಿ, ಸೂಕ್ತ ಸೇನಾ ನಾಯಕತ್ವ ಮತ್ತು ಶಿಸ್ತಿನ ಕೊರತೆ ಇತ್ತು.
- ಹೋರಾಟಗಾರರಲ್ಲಿ ನಿಶ್ಚಿತ ಗುರಿ ಇರಲಿಲ್ಲ.
- ಹಲವಾರು ದೇಶೀಯ ಸಂಸ್ಥಾನಗಳ ರಾಜರು ಬ್ರಿಟಿಷರಿಗೆ ತೋರಿದ ನಿಷ್ಠೆಯಿಂದಾಗಿ ಸಿಪಾಯಿಗಳಿಗೆ ಬೆಂಬಲ ನೀಡಲಿಲ್ಲ.
- ಸಿಪಾಯಿಗಳು ಮಾಡಿದಂತಹ ಲೂಟಿ, ದರೋಡೆ ಮೊದಲಾದ ಗಂಭೀರವಾದ ತಪ್ಪುಗಳಿಂದಾಗಿ ಜನರ ವಿಶ್ವಾಸ ಕಳೆದುಕೊಂಡರು.
6. ಸಾ.ಶ. 1857ರ ಬ್ರಿಟನ್ ರಾಣಿಯ ಘೋಷಣೆಯಲ್ಲಿದ್ದ ಅಂಶಗಳಾವುವು?
- ಕಂಪನಿಯು ದೇಶೀ ರಾಜರೊಂದಿಗೆ ಮಾಡಿಕೊಂಡಿದ್ದ ಒಪ್ಪಂದಗಳನ್ನು ಅಂಗೀಕರಿಸಲಾಯಿತು.
- ಪ್ರಾದೇಶಿಕ ವಿಸ್ತರಣೆಯ ಅಪೇಕ್ಷೆಯನ್ನು ಕೈಬಿಡುವುದು.
- ಭಾರತೀಯರಿಗೆ ಸುಭದ್ರ ಸರ್ಕಾರವನ್ನು ನೀಡುವುದು.
- ಕಾನೂನಿನ ಮುಂದೆ ಸಮಾನತೆ.
- ಧಾರ್ಮಿಕ ಸಹಿಷ್ಣುತೆಯೊಂದಿಗೆ ಧಾರ್ಮಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ.
ಹೆಚ್ಚುವರಿ ಪ್ರಶ್ನೆಗಳು:
I. ಬಿಟ್ಟಿರುವ ಸ್ಥಳವನ್ನು ಸೂಕ್ತ ಪದಗಳಿಂದ ತುಂಬಿರಿ;
1. ಸಾ.ಶ.1857ರ ಹೋರಾಟದ ಸಮಯದಲ್ಲಿ ಭಾರತದ ಚಕ್ರವರ್ತಿ ಎಂದು ಘೋಷಿಸಲ್ಪಟ್ಟ ಮೊಘಲ್ ದೊರೆ ಎರಡನೇ ಬಹುದ್ದೂರ ಷಾ
2. ಡಾಲ್ ಹೌಸಿಯು ಜಾರಿಗೆ ತಂದ ನೀತಿ ದತ್ತು ಮಕ್ಕಳಿಗೆ ಹಕ್ಕಿಲ್ಲ
3. ಸಾ.ಶ. 1857ರ ಹೋರಾಟವನ್ನು ಭಾರತೀಯ ಇತಿಹಾಸಕಾರರು ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಎಂದು ಕರೆದಿದ್ದಾರೆ.
II. ಈ ಪ್ರಶ್ನೆಗಳಿಗೆ ಉತ್ತರಿಸಿ:
1. ಮಂಗಲಪಾಂಡೆಯನ್ನು ಗಲ್ಲಿಗೇರಿಸಲು ಕಾರಣವೇನು?
ಮಂಗಲಪಾಂಡೆಯನ್ನು ಬ್ರಿಟಿಷ್ ಸೈನ್ಯದ ಅಧಿಕಾರಿಯೊಬ್ಬನನ್ನು ಕೊಂದ ಪರಿಣಾಮ ಅವನನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಗಲ್ಲಿಗೇರಿಸಲಾಯಿತು.
2. ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯಿಂದಾಗಿ ಬ್ರಿಟಿಷರ ವಶವಾದ ಸಂಸ್ಥಾನಗಳು ಯಾವುವು?
ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಯಿಂದಾಗಿ ಸತಾರ, ಜೈಪುರ, ಝಾನ್ಸಿ, ಉದಯಪುರ ಮೊದಲಾದ ಸಂಸ್ಥಾನಗಳು ಬ್ರಿಟಿಷರ ವಶವಾದವು.
3. ಸಾ.ಶ. 1857ರ ದಂಗೆಗೆ ಕಾರಣವಾದ ಸೈನಿಕ ಕಾರಣಗಳು ಯಾವುವು?
ಬ್ರಿಟಿಷರ ಸೈನ್ಯದಲ್ಲಿ ಭಾರತೀಯ ಸಿಪಾಯಿಗಳ ಸ್ಥಿತಿಯು ಗಂಭೀರವಾಗಿತ್ತು. ಅಂಗ್ಲ ಸೈನಿಕರಿಗಿದ್ದ ಸ್ಥಾನಮಾನ, ವೇತನ, ಬಡ್ತಿ ಅವಕಾಶಗಳು ಭಾರತೀಯ ಸಿಪಾಯಿಗಳಿಗೆ ಇರಲಿಲ್ಲ. ಭಾರತೀಯ ಸೈನಿಕರನ್ನು ಸಾಗರ ದಾಟಿದ ಸೇವೆಗೆ ಒತ್ತಾಯಿಸಿದ್ದು ಧಾರ್ಮಿಕವಾಗಿ ಸೈನಿಕರನ್ನು ಪ್ರಚೋದಿಸಿತು.
4. ಮೇಲಾಧಿಕಾರಿಗಳ ವಿರುದ್ಧ ಬ್ಯಾರಕ್ ಪುರದ ಸೈನಿಕರು ಬಂಡಾಯವೇಳಲು ಕಾರಣವೇನು?
ಸೈನಿಕರಿಗೆ ತುಪಾಕಿಯನ್ನು ಹಲ್ಲಿನಿಂದ ಕಚ್ಚಿ ತೆಗೆಯುವಂತೆ ಇಂಗ್ಲಿಷರು ಆದೇಶಿಸಿದಾಗ ಇದನ್ನು ನಿರಾಕರಿಸಿ ಮೇಲಾಧಿಕಾರಿಗಳ ವಿರುದ್ಧ ಬ್ಯಾರಕ್ ಪುರದ ಸೈನಿಕರು ಬಂಡಾಯವೆದ್ದರು.
5. ಸಾ.ಶ. 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಪರಿಣಾಮಗಳೇನು?
ಈಸ್ಟ್ ಇಂಡಿಯಾ ಕಂಪನಿಯ ಆಡಳಿತ ಕೊನೆಗೊಂಡು ಬ್ರಿಟನ್ ಸಾಮ್ರಾಜ್ಞೆಯ ಆಡಳಿತಕ್ಕೆ ಒಳಪಟ್ಟಿತು. ಭಾರತೀಯರ ಪ್ರೀತಿ, ಬೆಂಬಲ, ವಿಶ್ವಾಸವಿಲ್ಲದಿದ್ದರೆ ನಾವು ಶಾಂತಿಯಿಂದ ಆಳ್ವಿಕೆ ಮಾಡಲು ಸಾಧ್ಯವಿಲ್ಲವೆಂಬುದನ್ನು ಬ್ರಿಟಿಷರು ಅರಿತರು. ಇದು ಭಾರತೀಯರ ಹೋರಾಟಕ್ಕೆ ಹೊಸ ದಿಕ್ಕೂ ಚಿಯನ್ನು ನೀಡಿತು. ಭಾರತೀಯರು ಇನ್ನು ಮುಂದೆ ಹೋರಾಟದ ಪರ್ಯಾಯ ಮಾರ್ಗವನ್ನು ಹುಡುಕಿಕೊಳ್ಳುವ ಅನಿವಾರ್ಯತೆಯನ್ನು ಕಂಡುಕೊಂಡರು.
6. ಸಾ.ಶ. 1857ರ ಹೋರಾಟಕ್ಕೆ ಕಾರಣವಾದ ಆಡಳಿತಾತ್ಮಕ ಕಾರಣಗಳನ್ನು ತಿಳಿಸಿ.
ಇಂಗ್ಲಿಷರು ಹೊಸ ನಾಗರಿಕ ಮತ್ತು ಅಪರಾಧ ಕಾಯಿದೆಗಳನ್ನು ಜಾರಿಗೆ ತಂದರು. ಕಾನೂನಿನಲ್ಲಿ ಪಕ್ಷಪಾತ ಮತ್ತು ಭಾರತೀಯರಿಗೆ ಪ್ರತ್ಯೇಕ ನಿಯಮಗಳು ಅನ್ವಯವಾಗುತ್ತಿದ್ದವು. ಆಂಗ್ಲ ಭಾಷೆಯು ನ್ಯಾಯಾಲಯದ ಭಾಷೆಯಾಯಿತು. ಇಂಗ್ಲಿಷ್ ನ್ಯಾಯಾಧೀಶರು ಬಹುತೇಕವಾಗಿ ಇಂಗ್ಲಿಷರ ಪರವಾಗಿ ನ್ಯಾಯ ನೀಡುತ್ತಿದ್ದರು. ಹೊಸ ಕಾನೂನಿನ ಆಶಯಗಳು ಜನರಿಗೆ ಅರಿವಾಗಲಿಲ್ಲ.
ಮುಖ್ಯಾಂಶಗಳು:
- ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆಯ ಉದ್ದೇಶದಿಂದ ಇಂಗ್ಲಿಷರು ಜಾರಿಗೆ ತಂದ ಸಹಾಯಕ ಸೈನ್ಯ ಪದ್ದತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳು ಭಾರತೀಯರ ಅಸಮಾಧಾನಕ್ಕೆ ಕಾರಣವಾಗಿ ಸಾ.ಶ. ೧೮೫೭ರಲ್ಲಿ ಮಹಾಪ್ರತಿಭಟನೆಯ ರೂಪದಲ್ಲಿ ಸ್ಪೋಟಿಸಿತ್ತು.
- ರಾಜಕೀಯ, ಆರ್ಥಿಕ, ಆಡಳಿತಾತ್ಮಕ, ಸೈನಿಕ ಕಾರಣಗಳು ಸಾ.ಶ. ೧೮೫೭ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಾರಣಗಳು.
- ನಾನಾ ಸಾಹೇಬ, ತಾತ್ಯಾಟೋಪೆ, ಝಾನ್ಸಿರಾಣಿ ಲಕ್ಷ್ಮಿಭಾಯಿ ಇಂಗ್ಲಿಷರ ವಿರುದ್ಧ ಹೋರಾಡಿದರು.
- ಹಲವಾರು ಕಾರಣಗಳಿಂದ ಸಾ.ಶ. ೧೮೫೭ರಲ್ಲಿ ನಡೆದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮವು ವಿಫಲವಾಯಿತು.
- ದಂಗೆಯ ಪರಿಣಾಮವಾಗಿ ಈಸ್ಟ್ ಇಂಡಿಯಾ ಕಂಪನಿಯ ಆಡಳಿತ ಕೊನೆಗೊಂಡು ಬ್ರಿಟನ್ ಸಾಮ್ರಾಜ್ಞೆಯ ಆಡಳಿತಕ್ಕೆ ಒಳಪಟ್ಟಿತು.
- ಭಾರತೀಯರ ಪ್ರೀತಿ, ಬೆಂಬಲ, ವಿಶ್ವಾಸವಿಲ್ಲದಿದ್ದರೆ ನಾವು ಶಾಂತಿಯಿಂದ ಆಳ್ವಿಕೆ ಮಾಡಲು ಸಾಧ್ಯವಿಲ್ಲವೆಂಬುದನ್ನು ಬ್ರಿಟಿಷರು ಅರಿತರು.
- ಇದು ಭಾರತೀಯರ ಹೋರಾಟಕ್ಕೆ ಹೊಸ ದಿಕ್ಕೂಚಿಯನ್ನು ನೀಡಿತು. ಭಾರತೀಯರು ಇನ್ನು ಮುಂದೆ ಹೋರಾಟದ ಪರ್ಯಾಯ ಮಾರ್ಗವನ್ನು ಹುಡುಕಿಕೊಳ್ಳುವ ಅನಿವಾರ್ಯತೆಯನ್ನು ಕಂಡುಕೊಂಡರು.
ಇತರೆ ವಿಷಯಗಳು :
ಬ್ಯಾಂಕ್ ವ್ಯವಹಾರಗಳು ಪಾಠದ ನೋಟ್ಸ್
ಸ್ವಾತಂತ್ರ್ಯ ಹೋರಾಟ ಪಾಠದ ನೋಟ್ಸ್
10ನೇ ತರಗತಿ ಎಲ್ಲಾ ವಿಷಯಗಳ ನೋಟ್ಸ್